ಅಭಿಪ್ರಾಯ / ಸಲಹೆಗಳು

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ದಿನಾಂಕ 29.10.2021 ರಂದು ಬಂಟ್ವಾಳ ಸ್ಪರ್ಶ ಕಲಾಮಂದಿರದಲ್ಲಿ ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರ ನಡೆಯಿತು. ಸದರಿ ಕಾರ್ಯಾಗಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಋಷಿಕೇಶ್‌ ಭಗವಾನ್‌ ಸೋನಾವಣೆ‌ ಐ.ಪಿ.ಎಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್‌ ನಾಯ್ಕ್‌, ಬಂಟ್ವಾಳ ಪೊಲೀಸ್‌ ಉಪವಿಭಾಗದ ಸಹಾಯಕ ಪೊಲೀಸ್‌ ಅಧೀಕ್ಷಕರಾದ ಶಿವಾಂಶು ರಜಪೂತ್ ಐ.ಪಿ.ಎಸ್ ಸೇರಿದಂತೆ ಬಂಟ್ವಾಳ ಉಪವಿಭಾಗದ ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

            ಕಾರ್ಯಕ್ರಮದಲ್ಲಿ ನೆರೆದಿದ್ದ ವಿವಿಧ ಕಾಲೇಜುಗಳ ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಹಾಗೂ ಸಾರ್ವಜನಿಕರಿಗೆ ಜಿಲ್ಲೆಯ ಹಿರಿಯ ಪೊಲೀಸ್‌ ಅಧಿಕಾರಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶಗಳ ಕುರಿತ ಮಾಹಿತಿಯನ್ನು ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯುವಕ/ಯುವತಿಯರು ಪೊಲೀಸ್‌ ಇಲಾಖೆಗೆ ಸೇರಲು ಸೂಕ್ತ ಮಾರ್ಗದರ್ಶನ ನೀಡಿದರು. ಇದರೊಂದಿಗೆ ಪೊಲೀಸ್ ಹುತಾತ್ಮ ದಿನಾಚರಣೆಯ ಮಹತ್ವ, ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ಹಾಗೂ ಸಂಚಾರ ನಿಯಮಗಳು, ಮಾದಕದ್ರವ್ಯ ಸೇವನೆ, ಸೈಬರ್ ಅಪರಾಧ ಬಗ್ಗೆ ಕಾನೂನು ಅರಿವು ಮೂಡಿಸಲಾಯಿತು.

Photos

ಇತ್ತೀಚಿನ ನವೀಕರಣ​ : 23-11-2022 04:17 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080