ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

 

ಬಂಟ್ವಾಳ ಸಂಚಾರ ಪೊಲೀಸ್ ಠಾಣೆ:  ಪಿರ್ಯಾದಿದಾರರಾದ ಹರೀಶ್ ತಂದೆ: ದಿ|| ಪುಟ್ಟ ನಲಿಕೆ, ವಾಸ: ಶೆಟ್ಟಿಕಟ್ಟೆ ಉಳಿರೋಡಿ ಮನೆ, ಸಿದ್ದಕಟ್ಟೆ ಅಂಚೆ, ಕುಕ್ಕಿಪ್ಪಾಡಿ ಗ್ರಾಮ, ಬಂಟ್ವಾಳ ತಾಲೂಕು ಎಂಬವರು ದಿನಾಂಕ 04.07.2021 ರಂದು ಅಗತ್ಯ ದಿನಸಿ ಸಾಮಾನು ತರಲು ತನ್ನ ಅಣ್ಣ ಕೇಶವ ರವರ ಬಾಬ್ತು KA-19-ET-4896 ನೇ ಮೋಟಾರು ಸೈಕಲಿನಲ್ಲಿ ಸಹ ಸವಾರನಾಗಿಯೂ ಕೇಶವರವರು ಸವಾರನಾಗಿ ಮೋಟಾರ್ ಸೈಕಲನ್ನು ಸವಾರಿ ಮಾಡಿಕೊಂಡು ಕರ್ಪೆ ಕಡೆಗೆ ಹೋಗುತ್ತಾ ಸಮಯ ಸುಮಾರು 19.30 ಗಂಟೆಗೆ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಶೆಟ್ಟಿಕಟ್ಟೆ ಎಂಬಲ್ಲಿಗೆ ತಲುಪಿದಾಗ ಕರ್ಪೆ ಕಡೆಯಿಂದ KA-19-Y-5081 ನೇ ಮೋಟಾರ್ ಸೈಕಲನ್ನು ಅದರ ಸವಾರ ಪ್ರಭಾಕರ ನಾಯಕ್ ರವರು ಇತರ ವಾಹನಗಳನ್ನು ಓವರ್ ಟೇಕ್ ಮಾಡಿಕೊಂಡು ಅತೀವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು KA-19-ET-4896 ನೇ ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ಮೋಟಾರ್ ಸೈಕಲ್ ಸವಾರರಿಬ್ಬರೂ ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಪಿರ್ಯಾದಿದಾರರು, ಕೇಶವ ಮತ್ತು ಪ್ರಭಾಕರ ನಾಯಕ್ ರವರು ಗಾಯಗೊಂಡಿದ್ದು, ಪಿರ್ಯಾದಿದಾರರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಕೇಶವರವರು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಹಾಗೂ, ಪ್ರಭಾಕರ ನಾಯಕ್ ರವರು ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ. 59/2021  ಕಲಂ 279, 337  ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಉಪ್ಪಿನಂಗಡಿ ಪೊಲೀಸ್ ಠಾಣೆ:  ಪಿರ್ಯಾದಿದಾರರಾದ ಬಿಂದು ಕೆ ಎಸ್‌, ಪ್ರಾಯ  47 ವರ್ಷ  ಗಂಡ. ಶಶಿದರ ಕೆ ಆರ್‌  ವಾಸ:  ಪದಂಬಳ ಮನೆ,  ಶಿರಾಡಿ ಗ್ರಾಮ ಕಡಬ ತಾಲೂಕು  ಎಂಬವರ ದೂರಿನಂತೆ ದಿನಾಂಕ: 05-07-2021 ರಂದು 12.50 ಗಂಟೆ ಸಮಯಕ್ಕೆ ಕಡಬ ತಾಲೂಕು  ಶಿರಾಡಿ ಗ್ರಾಮದ ಶಿರಾಡಿ ಜಂಕ್ಷನ್‌ ಎಂಬಲ್ಲಿ ದ್ಚಿಚಕ್ರ ವಾಹನ  ಕೆಎ:21ವೈ5930ನೇ ದನ್ನು ಕೆ  ಸೋಮನ್‌ ಪ್ರಾಯ 57 ವರ್ಷ ಎಂವರು ಉದನೆ ಕಡೆಯಿಂದ ಶಿರಾಡಿ ಕಡೆಗೆ ಚಲಾಯಿಸಿಕೊಂಡು ಬರುತ್ತಾ ಶಿರಾಡಿ ಜಂಕ್ಷನ್‌ ತಲುಪುವಾಗ  ಉದನೆ ಕಡೆಯಿಂದ ಶಿರಾಡಿ ಕಡೆಗೆ  ಕೆಎ:50ಎಂ.ಎ 7299ನೇ  ಬ್ರಿಝಾ  ಕಾರನ್ನು ಅದರ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ದ್ಚಿಚಕ್ರ ವಾಹನಕ್ಕೆ  ಹಿಂದಿನಿಂದ  ಡಿಕ್ಕಿ ಹೊಡೆದ ಪರಿಣಾಮ ದ್ಚಿಚಕ್ರ ವಾಹನ ಸವಾರ ಸೋಮನ್‌ ರವರು  ವಾಹನ ಸಮೇತ ಡಾಮಾರು ರಸ್ತೆಗೆ  ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯಗೊಂಡು ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವುದಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ 63/2021  ಕಲಂ  279 338  ಐ ಪಿ ಸಿ    ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಅಸ್ವಾಭಾವಿಕ ಮರಣ ಪ್ರಕರಣ: 1

 

ಉಪ್ಪಿನಂಗಡಿ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಧರ್ಮ, ಪ್ರಾಯ 40 ವರ್ಷ      ತಂದೆ:ದಿ, ಬಸಪ್ಪ   ವಾಸ:  ಸುಗನಹಳ್ಳಿ ಗ್ರಾಮ   ಶಿರಹಟ್ಟಿ ತಾಲೂಕು ಗದಗ ಜಿಲ್ಲೆ   ಎಂಬವರು ಹೆಂಡತಿ ಮತ್ತು ಇಬ್ಬರು ಮಕ್ಕಳೊಂದಿಗೆ ಸುಮಾರು 6 ವರ್ಷಗಳ ಹಿಂದೆ ಡಾ. ಗೋವಿಂದ ಪ್ರಸಾದ್ ಕಜೆ ಎಂಬವರ ಮನೆಯಲ್ಲಿ ಕೆಲಸಕ್ಕೆಂದು ಬಂದು ಉಳಕೊಂಡ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗನಹಳ್ಳಿ ಗ್ರಾಮದ ಪಿರ್ಯಾದಿದಾರರ ಮಕ್ಕಳಾದ ನಿಂಗರಾಜು ಪ್ರಾಯ 16 ವರ್ಷ ಸತೀಶ್ ಪ್ರಾಯ 14 ವರ್ಷ ಎಂಬವರುಗಳು ದಿನಾಂಕ 05/07/2021 ರಂದು ಸಂಜೆ ಸುಮಾರು 5:15 ಗಂಟೆಯಿಂದ ಸಂಜೆ 6:00 ಗಂಟೆಯ ಮಧ್ಯೆ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಕಜೆ ಎಂಬಲ್ಲಿರುವ ನೇತ್ರಾವತಿ ನದಿ ನೀರಿನಲ್ಲಿ ಸ್ನಾನ ಮಾಡಲು ನೇತ್ರಾವತಿ ನದಿ ನೀರಿಗೆ ಇಳಿದಾಗ ಈಜು ಬಾರದೇ ನಿಂಗರಾಜು ಮತ್ತು ಸತೀಶ್ ಎಂಬುವರು ನದಿ ನೀರಿನಲ್ಲಿ ಮುಳಗಿ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಯು ಡಿ ಅರ್ ನಂಬ್ರ  23/2021  ಕಲಂ  174 ಸಿ.ಆರ್.ಪಿ.ಸಿ. ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 06-07-2021 11:13 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080