ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ರಾಜೀವ ಪ್ರಾಯ 47 ವರ್ಷ,  ತಂದೆ: ದಿ|| ವೆಂಕಪ್ಪ ಪೂಜಾರಿ ವಾಸ: ತುಂಬೆ ಗಾಣದಲಚ್ಚಿಲ್ ಮನೆ , ತುಂಬೆ ಗ್ರಾಮ, ಬಂಟ್ವಾಳ ತಾಲೂಕು ಎಂಬವರ ದೂರಿನಂತೆ ಪಿರ್ಯಾದಿದಾರರು ದಿನಾಂಕ 06-10-2021 ರಂದು ತನ್ನ ಬಾಬ್ತು KA-70-H-5357 ನೇ ಸ್ಕೂಟರಿನಲ್ಲಿ ಅಗತ್ಯ ಕೆಲಸದ ನಿಮಿತ್ತ ತುಂಬೆ ಕಡೆಯಿಂದ ಫರಂಗೀಪೇಟೆ ಕಡೆಗೆ ಸವಾರಿ ಮಾಡಿಕೊಂಡು ಹೋಗುತ್ತಾ ಸಮಯ ಸುಮಾರು ಮಧ್ಯಾಹ್ನ 13:30 ಗಂಟೆಗೆ ಬಂಟ್ವಾಳ ತಾಲೂಕು ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿಗೆ ತಲುಪಿದಾಗ ಬಿ.ಸಿ.ರೋಡ್ ಕಡೆಯಿಂದ KA-05-MC-9607 ನೇ ಓಮ್ನಿ ಕಾರನ್ನು ಅದರ ಚಾಲಕ ಹಬೀಬ್ ಎಂಬವರು ಅತೀ ವೇಗ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿಯ ಸ್ಕೂಟರಿನ ಹಿಂಬದಿಗೆ ಢಿಕ್ಕಿ ಹೊಡೆದು ಅಪಘಾತ ಪಡಿಸಿದ ಪರಿಣಾಮ ಪಿರ್ಯಾದಿದಾರರು ಸ್ಕೂಟರ್ ಸಮೆತ ರಸ್ತೆಗೆ ಬಿದ್ದು ಬಲಬದಿ ತಲೆಗೆ, ಬಲ ಭುಜಕ್ಕೆ, ಬಲ ಬದಿ ಪಕ್ಕೆಲುಬಿಗೆ, ಬಲಕಾಲಿಗೆ ಗುದ್ದಿದ ಹಾಗೂ ತರಚಿದ ಗಾಯಗೊಂಡವರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಕಂಕನಾಡಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ. 105/2021  ಕಲಂ 279,337, ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಲಕ್ಷ್ಮಿ ನಾರಾಯಣ ನಾಯ್ಕ್‌ ಎಸ್‌, ಪ್ರಾಯ 43 ವರ್ಷ, ತಂದೆ: ದಿ|| ಸುಂದರ ನಾಯ್ಕ್‌,  ವಾಸ:  ಜಿಡೆಕಲ್ಲಿ ಮನೆ, ಚಿಕ್ಕಮುಡ್ನೂರು ಗ್ರಾಮ ಮತ್ತು ಅಂಚೆ, ಪುತ್ತೂರು ತಾಲೂಕು ಎಂಬವರ ದೂರಿನಂತೆ ದಿನಾಂಕ 06-10-2021 ರಂದು 19-00 ಗಂಟೆಗೆ ಆರೋಪಿ ಮೋಟಾರ್‌ ಸೈಕಲ್‌ ಸವಾರ ರತ್ನಾಕರ ಎಂಬವರು KA-21-V-7339 ನೇ ನೋಂದಣಿ ನಂಬ್ರದ ಮೋಟಾರ್‌ ಸೈಕಲನ್ನು ಪುತ್ತೂರು-ಮಂಜಲ್ಪಡ್ಪು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಮಂಜಲ್ಪಡ್ಪು ಕಡೆಯಿಂದ ಪುತ್ತೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸ್ಬಾ ಗ್ರಾಮದ ಬೊಳ್ವಾರು ವಿಶ್ಚಕರ್ಮ ಹಾಲ್‌ ಕ್ರಾಸ್‌ ಬಳಿ  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಾಂಗ್‌ ಸೈಡಿಗೆ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರು ಪುತ್ತೂರು ಕಡೆಯಿಂದ ಮಂಜಲ್ಪಡ್ಪು ಕಡೆಗೆ  ಚಲಾಯಿಸಿಕೊಂಡು ಹೋಗುತ್ತಿದ್ದ KA-21-X-4889 ನೇ ನೋಂದಣಿ ನಂಬ್ರದ ರಾಯಲ್‌ ಎನ್‌ಫೀಲ್ಡ್‌ ಬುಲೆಟ್‌ ಮೋಟಾರ್‌ ಸೈಕಲಿಗೆ ಡಿಕ್ಕಿ ಹೊಡೆದು, ಎರಡೂ ಮೋಟಾರ್‌ ಸೈಕಲ್‌ ಸವಾರರು ಮೋಟಾರ್‌ ಸೈಕಲ್‌ ಸಮೇತ ರಸ್ತೆಗೆ ಬಿದ್ದು, ಪಿರ್ಯಾದುದಾರರಿಗೆ  ಬಲಕಾಲಿನ ಹಿಮ್ಮಡಿಗೆ ರಕ್ತಗಾಯ, ಎಡಕೋಲು ಕಾಲಿಗೆ ಗುದ್ದಿದ ನೋವು, ಎರಡೂ ಕೈಗಳ ಕೋಲು ಕೈಗೆ ತರಚಿದ ಗಾಯವಾಗಿ, ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಆರೋಪಿ ಸವಾರನಿಗೆ ಎಡಕಾಲಿನ ಪಾದಕ್ಕೆ ರಕ್ತಗಾಯ, ಬಲಕಾಲಿನ ತೋರು ಬೆರಳಿಗೆ ರಕ್ತಗಾಯ ಹಾಗೂ ತಲೆಯ ಹಿಂಬದಿಗೆ ರಕ್ತಗಾಯವಾಗಿ ಚಿಕಿತ್ಸೆ ಬಗ್ಗೆ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  122/2021 ಕಲಂ: 279, 337  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಕಾಣೆ ಪ್ರಕರಣ: 1

ಧರ್ಮಸ್ಥಳ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಶ್ರೀಮತಿ ಸ್ವಾತಿ  ಪ್ರಾಯ:27 ವರ್ಷ ಗಂಡ: ಗಣೇಶ ಎಮ್ ಎಲ್  ವಾಸ; ಕಲ್ಲೇರಿ ಮಾರ್ಕೆಟ್ ಬಳಿ ಧರ್ಮಸ್ಥಳ ಗ್ರಾಮ ಬೆಳ್ತಂಗಡಿ ತಾಲೂಕು ಎಂಬವರ ದೂರಿನಂತೆ ಪಿರ್ಯಾದಿದಾರರ ಗಂಡ ಗಣೇಶ ಎಮ್ ಎಲ್ ರವರು ಸೊಂಟ ನೋವಿನಿಂದ ಬಳಲುತ್ತಿದ್ದವರು ಚಿಕಿತ್ಸೆ ಪಡೆಯುತ್ತಿದ್ದು  ದಿನಾಂಕ: 06/10/2021 ರಂದು ಬೆಳಗ್ಗೆ ಧರ್ಮಸ್ಥಳ ದೇವಾಸ್ಥಾನದ ಜೆಸಿಬಿಯಲ್ಲಿ ಆಪರೇಟರ್ ಕೆಲಸಕ್ಕೆ ಹೋಗಿದ್ದವರು ಮಧ್ಯಾಹ್ನ 1.00 ಗಂಟೆಗೆ ಊಟಕ್ಕೆ ಮನೆಗೆ ಬಂದವರು ಊಟ ಮುಗಿಸಿ 2.00 ಗಂಟೆಗೆ ಕೆಲಸಕ್ಕೆಂದು ಹೋದವರು ಸಂಜೆ ಆದರೂ ಮರಳಿ ಬಾರದ ಕಾರಣ ಪಿರ್ಯಾದಿದಾರರು ಅವರ ಜೊತೆ ಕೆಲಸ ಮಾಡುತ್ತಿದ್ದ ರಾಘವೇಂದ್ರ ರವರ ಮೊಬೈಲ್ ಗೆ ಕರೆ ಮಾಡಿ ಕೇಳಿದಾಗ ಗಣೇಶರು ಮಧ್ಯಾಹ್ನ ದವರೆಗೆ ಮಾತ್ರ ಕೆಲಸಕ್ಕೆ ಬಂದಿರುತ್ತಾರೆ ಎಂಬುದಾಗಿ ತಿಳಿಸಿದ್ದು ಈ ಬಗ್ಗೆ ಸಂಬಂಧಿಕರಲ್ಲಿ ನೆರೆಹೊರೆಯವರಲ್ಲಿ  ಹಾಗೂ ಧರ್ಮಸ್ಥಳ ದೇವಾಸ್ಥಾನದ ವಠಾರದಲ್ಲಿ ಹುಡುಕಾಡಿದಲ್ಲಿ ಈವರೆಗೆ  ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ 59/2021 ಕಲಂ: ಗಂಡಸು ಕಾಣೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 08-10-2021 10:15 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080