Feedback / Suggestions

ಅಪಘಾತ ಪ್ರಕರಣ: 4

ಸುಳ್ಯ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಬಾಲಚಂದ್ರ (36), ತಂದೆ: ಕೃಷ್ಣಪ್ಪ ನಾಯ್ಕ, ವಾಸ:ನೀರಬಿದಿರೆ ಮನೆ, ಸುಳ್ಯ ಕಸಬಾ ಗ್ರಾಮ, ಸುಳ್ಯ ತಾಲೂಕು ಎಂಬವರ ದೂರಿನಂತೆ ದಿನಾಂಕ: 17.01.2022 ರಂದು ಪಿರ್ಯಾದಿದಾರರು ಮತ್ತು ಅವರ ಸ್ನೇಹಿತ ಯತೀನ್‌ ಎಂಬವರು ತಮ್ಮ ತಮ್ಮ ಮೋಟಾರ್‌ ಸೈಕಲಿನಲ್ಲಿ ಸುಳ್ಯ - ಸುಬ್ರಹ್ಮಣ್ಯ ಡಾಮಾರು ರಸ್ತೆಯಲ್ಲಿ ಸುಳ್ಯ ಕಡೆಗೆ ಬರುತ್ತಾ ಸಮಯ ಸುಮಾರು 15:30 ಗಂಟೆಗೆ  ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಗೊಂಟಡ್ಕ ಸುತ್ತುಕೋಟೆ ಎಂಬಲ್ಲಿಗೆ ತಲುಪಿದಾಗ ಪಿರ್ಯಾದಿದಾರರ ಎದುರಿನಿಂದ ಅವರ ಸ್ನೇಹಿತ ಯತೀನ್‌ ತನ್ನ ಬಾಬ್ತು ಮೋಟಾರ್‌ ಸೈಕಲ್‌ ನಂಬ್ರ KA21Y8937 ನೇದನ್ನು ಸವಾರಿ ಮಾಡಿಕೊಂಡು ಹೋಗುತ್ತಿದ್ದಾಗ ರಸ್ತೆಯ ಎಡಬದಿಯಲ್ಲಿ ನಿಂತಿದ್ದ ಟಿಪ್ಪರ್‌ ಲಾರಿಯೊಂದನ್ನು ಅದರ ಚಾಲಕರು ಒಮ್ಮೇಲೆ ಯಾವುದೇ ಸೂಚನೆಯನ್ನು ನೀಡದೇ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ರಸ್ತೆಯ ಬಲಬದಿಗೆ ಚಲಾಯಿಸಿದ ಪರಿಣಾಮ ಯತೀನ್‌ರವರ ಮೋಟಾರ್‌ ಸೈಕಲಿಗೆ ಡಿಕ್ಕಿ ಪಡಿಸಿದ ಪರಿಣಾಮ ಯತೀನ್‌ ಬೈಕ್‌ ಸಮೇತ ರಸ್ತೆ ಎಸೆಯಲ್ಪಟ್ಟಿದ್ದು, ಹಿಂದಿನಿಂದ ಬರುತ್ತಿದ್ದ ಪಿರ್ಯಾದಿದಾರರು ತನ್ನ  ಮೋಟಾರ್‌ ಸೈಕಲನ್ನು ನಿಲ್ಲಿಸಿ ಯತೀನ್‌ ನನ್ನು ಉಪಚರಿಸಿ ನೋಡಲಾಗಿ ಎಡಕೈಗೆ, ಹಣೆಯ ಎಡಬದಿ, ಮೂಗಿಗೆ ರಕ್ತಗಾಯವಾಗಿದ್ದು, ಟಿಪ್ಪರ್‌ ಲಾರಿಯ ನಂಬ್ರ ನೋಡಲಾಗಿ KA21B7200 ಆಗಿದ್ದು, ಅದರ ಚಾಲಕನ ಹೆಸರು ಲೊಕೇಶ ಎಂಬುದಾಗಿ ತಿಳಿದಿದ್ದು, ಬಳಿಕ ಯತೀನ್‌ನ್ನು ಚಿಕಿತ್ಸೆಯ ಬಗ್ಗೆ ಸುಳ್ಯ ಸರಕಾರಿ ಆಸ್ಪತ್ರೆಗ ಕರೆದುಕೊಂಡು ಬಂದಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿರುವುದಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅ.ಕ್ರ 08/2022 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಕಿಶನ್ ಆಚಾರ್ಯ, ಪ್ರಾಯ 21 ವರ್ಷ ತಂದೆ: ಸದಾಶಿವ ಆಚಾರ್ಯ, ವಾಸ: 2-78ಬಿ, ಕಡಂಬು ಮನೆ, ಪೆರ್ನೆ ಅಂಚೆ ಮತ್ತು ಗ್ರಾಮ, ಬಂಟ್ವಾಳ ತಾಲೂಕು ಎಂಬವರ ದೂರಿನಂತೆ ದಿನಾಂಕ 16-01-2022 ರಂದು 17-50 ಗಂಟೆಗೆ ಆರೋಪಿ ಮೋಟಾರ್ ಸೈಕಲ್ ಸವಾರ ಅಬ್ದುಲ್ ಸಲಾಂ   ಎಂಬವರು KA-21-EA-7671 ನೇ ನೋಂದಣಿ ನಂಬ್ರದ ಮೋಟಾರ್ ಸೈಕಲಿನಲ್ಲಿ ಮಹಮ್ಮದ್ ಸಾಹಿರ್ ಎಂಬವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗಡಿಯಾರ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಚಲಾಯಿಸಿಕೊಂಡು ಹೋಗಿ, ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರು ಸವಾರರಾಗಿ, ಸುಗುಣ ರವರು ಸಹಸವಾರರಾಗಿ KA-19-EP-4993 ನೇ ನೋಂದಣಿ ನಂಬ್ರದ ಸ್ಕೂಟರಿನಲ್ಲಿ ಗಡಿಯಾರ ಕಡೆಯಿಂದ ಕಡಂಬು ಕಡೆಗೆ ಹೋಗಿ, ಹೆದ್ದಾರಿಯ ಬಲಭಾಗದಲ್ಲಿರುವ ಒಳರಸ್ತೆಗೆ ಹೋಗಲು ಚಲಾಯಿಸಿಕೊಂಡು ಹೋಗುತ್ತಿರುವಾಗ ಮೋಟಾರ್‌ ಸೈಕಲ್‌ ಸ್ಕೂಟರಿಗೆ ಹಿಂದಿನಿಂದ ಅಪಘಾತವಾಗಿ ರಸ್ತೆಗೆ ಬಿದ್ದು, ಸಹಸವಾರೆ ಗಾಯಗೊಂಡು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಎ.ಜೆ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಉಳಿದವರಿಗೆ ಚಿಕಿತ್ಸೆ ಪಡೆಯಬೇಕಾದ ಗಾಯಗಳಾಗಿರುವುದಿಲ್ಲ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  09/2022 ಕಲಂ: 279,337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಪುಂಜಾಲಕಟ್ಟೆ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಗಣೇಶ್, ಪ್ರಾಯ: 54 ವರ್ಷ, ತಂದೆ: ವೀರಪ್ಪ , ವಾಸ: ಪುಳಿಮಜಲು ಮನೆ, ಕುಕ್ಕಳ ಗ್ರಾಮ, ಬೆಳ್ತಂಗಡಿ ತಾಲೂಕುಎಂಬವರ ದೂರಿನಂತೆ ದಿನಾಂಕ: 17.01.2022 ರಂದು ಪಿರ್ಯಾದಿದಾರರು ತನ್ನ ಸಹೋದರನ ಮನೆಗೆ ದ್ವಿಚಕ್ರ ವಾಹನ ನಂಬ್ರ KA21S1704 ನೇದರಲ್ಲಿ ಸಹಸವಾರನಾಗಿ ತನ್ನ ಮಗ  ಶ್ರೀಧರ ಎಂಬಾತನನ್ನು ಕುಳ್ಳಿರಿಸಿಕೊಂಡು ಹೋಗುತ್ತಾ  ಸಮಯ ಸುಮಾರು 13.30 ಗಂಟೆಗೆ ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ನೀಲಿ ದೇವಸ್ಥಾನದ ಕ್ರಾಸ್ ಬಳಿ ತಲುಪಿದಾಗ ಎದುರಿನಿಂದ ಅಂದರೆ ವಾಮದಪದವು ಕಡೆಯಿಂದ ಆರೋಪಿ ನಿತಿನ್ ಎಂಬಾತನು ನೋಂದಣಿಯಾಗದ ಎಲೆಕ್ಟ್ರಿಕ್ ಸ್ಕೂಟರ್ ನ್ನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಬಲಬದಿಗೆ  ಸವಾರಿ ಮಾಡಿಕೊಂಡು ಬಂದು ಪಿರ್ಯಾದಿದಾರರು ಸವಾರಿ ಮಾಡುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಾಗ  ಪಿರ್ಯಾದಿದಾರರು ಕೂಡಲೇ ಸವಾರಿ ಮಾಡುತ್ತಿದ್ದ ದ್ವಿಚಕ್ರ ವಾಹನದಿಂದ ಹಾರಿದ್ದು, ಸಹಸವಾರನಾಗಿದ್ದ ಪಿರ್ಯಾದಿದಾರರ ಮಗ ದ್ವಿಚಕ್ರ ವಾಹನ ಸಮೇತ ಡಾಮಾರು ರಸ್ತೆಗೆ ಬಿದ್ದು, ತಲೆಗೆ ರಕ್ತಗಾಯವಾಗಿ ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿದ್ದವನನ್ನು ಚಿಕಿತ್ಸೆ ಬಗ್ಗೆ ಅಲ್ಲಿ ಸೆರಿದ್ದ ಇತರರು ವಾಮದಪದವು ಸರಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮೇಲ್ದರ್ಜೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ  ಮಂಗಳೂರು ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ಕರೆದುಕೊಂಡು ಹೋಗುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆ 03/2022 ಕಲಂ: 279, 304(ಎ) ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ರಿಯಾಝ್ಪ್ರಾಯ 34 ವರ್ಷ ತಂದೆ: ದಿ.ಹನೀಫ್, ವಾಸ:ಸಬರಬೈಲು ಮನೆ ಕುವೆಟ್ಟು  ಗ್ರಾಮ & ಅಂಚೆ, ಬೆಳ್ತಂಗಡಿ ತಾಲೂಕು. ಎಂಬವರ ದೂರಿನಂತೆ ದಿನಾಂಕ: 17-01-2022 ರಂದು KA21 K 9502 ನೇ ಮೋಟಾರ್‌ ಸೈಕಲ್ ನಲ್ಲಿ ಸವಾರ ಮಿಸ್ಪಾವುದ್ದೀನ್‌  ಎಂಬುವರು ಸಹ ಸವಾರನಾಗಿ ಅಸ್ಫಾನ್‌ ಎಂಬವರನ್ನು ಕುಳ್ಳಿರಿಸಿಕೊಂಡು ಮಡಂತ್ಯಾರು ಕಡೆಯಿಂದ ಗುರುವಾಯನಕೆರೆ ಕಡೆಗೆ ಸವಾರಿ ಮಾಡಿಕೊಂಡು ಬರುತ್ತಾ ಸಮಯ ಸುಮಾರು ರಾತ್ರಿ 08:30 ಗಂಟೆಗೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ M M ಕಾಂಪ್ಲೆಕ್ಸ್‌ ಬಳಿ ತಲುಪುತ್ತಿದ್ದಂತೆ ವಿರುದ್ದ ದಿಕ್ಕಿನಿಂದ ಅಂದರೆ ಗುರುವಾಯನಕೆರೆ ಕಡೆಯಿಂದ ಮಡಂತ್ಯಾರು ಕಡೆಗೆ KA20 B 7574 ನೇ ಈಚರ್‌ ಲಾರಿಯನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಬಂದು ಮೋಟಾರ್‌ ಸೈಕಲ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್‌ ಸೈಕಲ್‌ ಸವಾರ ಮಿಸ್ಪಾವುದ್ದಿನ್ ರವರು ತಲೆಗೆ, ಮುಖಕ್ಕೆ,ಬಲಕೈ ಗೆ , ಬಲಕಾಲಿಗೆ ತೀವ್ರ ಸ್ವರೂಪದ ಗಾಯ ಹಾಗೂ ಸಹ  ಸವಾರ ಅಸ್ಫಾನ್‌ ರವರು ತಲೆಗೆ, ಮೈ ಕೈಗೆ ತೀವ್ರ ಸ್ವರೂಪದ ಗಾಯಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಲ್ಲಿ ಅಲ್ಲಿನ ವೈದ್ಯರು ಎರಡೂ ಗಾಯಾಳುಗಳನ್ನು ರಾತ್ರಿ 09:00 ಗಂಟೆಗೆ ಪರೀಕ್ಷಿಸಿ ಇಬ್ಬರೂ ಗಾಯಾಳುಗಳು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ  ಠಾಣಾ ಅ.ಕ್ರ: 10/2022 ಕಲಂ; 279,304(ಎ)ಭಾದಂ.ಸಂ. ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತರೆ ಪ್ರಕರಣ: 1

ವಿಟ್ಲ ಪೊಲೀಸ್ ಠಾಣೆ : ದಿನಾಂಕ:17-01-2022 ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 12/2022 ಕಲಂ:406,420 ಬಾಧಂಸಂ ಯಂತೆ ಪ್ರಕರಣ ದಾಖಲಾಗಿರುತ್ತದೆ.

Last Updated: 18-01-2022 10:03 AM Updated By: Dakshina Kannada District Police


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : DAKSHINA KANNADA DISTRICT POLICE
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080