Feedback / Suggestions

ಅಪಘಾತ ಪ್ರಕರಣ: 3

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಜಯಂತ್‌ ಬಿ ಎನ್‌, ಪ್ರಾಯ 38 ವರ್ಷ, ತಂದೆ: ನಾರಾಯಣ ಪೂಜಾರಿ, ವಾಸ: ಬರಮೇಲು ಮನೆ, ಬಿಳಿಯೂರು ಗ್ರಾಮ, ಪೆರ್ನೆ ಅಂಚೆ, ಬಂಟ್ವಾಳ ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ 18-05-2021 ರಂದು ಆರೋಪಿ ಕಾರು ಚಾಲಕ ಅರುಣ್ ಕುಮಾರ್ ಬಿ ಎಂಬವರು KA-21-N-9104 ನೇ ನೋಂದಣಿ ನಂಬ್ರದ ಕಾರನ್ನು ಪುತ್ತೂರು-ಉಪ್ಪಿನಂಗಡಿ ದ್ವಿಪಥ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಎಂಬಲ್ಲಿ ಪೆಟ್ರೋಲ್ ಪಂಪ್ ಬಳಿ ತಿರುವು ರಸ್ತೆಯಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಕಾರು ರಾಂಗ್ ಸೈಡ್ಗೆ ಹೋಗಿ, ಕಾರಿನ ಎಡಭಾಗವು ರಸ್ತೆ ಮಧ್ಯದ ಡಿವೈಡರ್ಗೆ ಅಪಘಾತವಾಗಿ, ಕಾರು ಬಲಭಾಗಕ್ಕೆ ಪಲ್ಟಿಯಾಗಿ ಗಂಭೀರ ಗಾಯಗೊಂಡ ಚಾಲಕ ಅರುಣ್ ಕುಮಾರ್ ಬಿ ರವರನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿರುತ್ತಾರೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  87/2021  ಕಲಂ: 279, 304(ಎ) ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಹರಿಕೃಷ್ಣ ಬಿ, ಪ್ರಾಯ 29 ವರ್ಷ, ತಂದೆ: ಮಾಧವ ಬಿ, ವಾಸ: ಬೊಟ್ಯಾಡಿ ಮನೆ, ಸರ್ವೆ ಗ್ರಾಮ & ಅಂಚೆ, ಪುತ್ತೂರು ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ 18-05-2021 ರಂದು ಆರೋಪಿ ಮೋಟಾರ್ ಸೈಕಲ್ ಸವಾರ ಕೇಶವ  ಎಂಬವರು KA-21-K-5305 ನೇ ನೋಂದಣಿ ನಂಬ್ರದ ಮೋಟಾರ್ ಸೈಕಲಿನಲ್ಲಿ ವಸಂತಿ ಎಂಬವರನ್ನು ಸಹಸವಾರೆಯನ್ನಾಗಿ ಕುಳ್ಳಿರಿಸಿಕೊಂಡು ಪುರುಷರಕಟ್ಟೆ-ಶಾಂತಿಗೋಡು ಸಾರ್ವಜನಿಕ ರಸ್ತೆಯಲ್ಲಿ ಪುರುಷರಕಟ್ಟೆ ಕಡೆಯಿಂದ ಶಾಂತಿಗೋಡು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಮಾಯಂಗಳ ಎಂಬಲ್ಲಿ ಬಿಂದು ಫ್ಯಾಕ್ಟರಿ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಮೋಟಾರ್ ಸೈಕಲ್  ಸವಾರನ ಹತೋಟಿ ತಪ್ಪಿ ಮಗುಚಿ ಬಿದ್ದು, ಸಹಸವಾರೆ ವಸಂತಿ ರವರಿಗೆ ತಲೆಗೆ ಹಾಗೂ ಕಿವಿಗೆ ಗಾಯಗಳಾಗಿದ್ದು,  ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಫಸ್ಟ್‌ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸವಾರನಿಗೆ ಯಾವುದೇ ಗಾಯಗಳಾಗಿರುವುದಿಲ್ಲ ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  88/2021  ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಬೆಳ್ಳಾರೆ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ವೀಣಾ ಪ್ರಾಯ 40 ವರ್ಷ, ಗಂಡ: ಗಣೇಶ ಎಸ್. ಪಿ, ವಾಸ; ಪೆಲತ್ತಡ್ಕ ಮನೆ, ಗೂನಡ್ಕ, ಸಂಪಾಜೆ ಗ್ರಾಮ, ಸುಳ್ಯ ತಾಲೂಕು, ದ.ಕ. ಜಿಲ್ಲೆ ರವರು ದಿನಾಂಕ 17-05-2021 ರಂದು ಅವರ ಗಂಡ ಗಣೇಶ್ ಎಸ್.ಪಿ ರವರು ಸವಾರಿ ಮಾಡುತ್ತಿದ್ದ ಆಕ್ಟಿವಾ ಹೊಂಡಾ ಸ್ಕೂಟರ್ ನಂಬ್ರ ಕೆಎ-21-ಯು-8858 ನೇಯದರಲ್ಲಿ ಸಹಸವಾರೆಯಾಗಿ ಕುಳಿತು ಹೋಗುತ್ತಿರುವಾಗ ಕುಕ್ಕುಜಡ್ಕ-ದೊಡ್ಡತೋಟ ರಸ್ತೆಯಲ್ಲಿ ಸುಳ್ಯ ತಾಲೂಕು ಅಮರಮುಡ್ನೂರು ಗ್ರಾಮದ ಕುಂಟಿಕಾನ ಎಂಬಲ್ಲಿಗೆ ತಲುಪಿದಾಗ ಎದುರುಗಡೆಯಿಂದ ಅಂದರೆ ದೊಡ್ಡತೋಟ ಕಡೆಯಿಂದ ಟಿಪ್ಪರ್ ಲಾರಿಯೊಂದನ್ನು ಅದರ ಚಾಲಕನು ತೀರಾ ಅಜಗಾರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಆಕ್ಟಿವಾ ಹೊಂಡಾ ಸ್ಕೂಟರ್ ನಂಬ್ರ ಕೆಎ-21-ಯು-8858 ನೇಯದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಹಾಗೂ ಸಹಸವಾರೆ ಸೂಟರ್ ಸಮೇತ ರಸ್ತೆಗೆ ಬಿದ್ದು, ಫಿರ್ಯಾದಿದಾರರಿಗೆ ಬಲಕಾಲಿಗೆ ರಕ್ತ ಗಾಯ ಮತ್ತು ಎಡತೊಡೆಯ ಬಳಿ ಗುದ್ದಿದ ನಮೂನೆಯ ಗಾಯ ಹಾಗೂ ಸವಾರ ಗಣೇಶ ರವರಿಗೆ ಕಾಲಿಗೆ ಮತ್ತು ಕೈಗೆ ರಕ್ತ ಗಾಯ ಹಾಗೂ ಭುಜದ ಬಳಿ ತೀವ್ರ ರೀತಿಯ ಗುದ್ದಿದ ನಮೂನೆಯ ಗಾಯಗಳಾಗಿ ಫಿರ್ಯಾದಿದಾರರು ಸುಳ್ಯ ಕೆ.ವಿ.ಜಿ ಆಸ್ಪತ್ರೆಯಲ್ಲಿ ಮತ್ತು ಸವಾರ ಗಣೇಶ ರವರು ಮಂಗಳೂರಿನ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಗ್ಗೆ ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ  ಬೆಳ್ಳಾರೆ ಪೊಲೀಸ್ ಠಾಣಾ  ಅಕ್ರ 24/2021 ಕಲಂ 279, 338 ಐಪಿಸಿ ಮತ್ತು 134 (a)(b) IMV ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

Last Updated: 19-05-2021 12:11 PM Updated By: Dakshina Kannada District Police


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : DAKSHINA KANNADA DISTRICT POLICE
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080