ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 3

  • ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಮಹಾಲಿಂಗಪ್ಪಪ್ರಾಯ: ( 37) ವರ್ಷ ತಂದೆ: ಮುದುಕಪ್ಪ.‌ ವಾಸ:ಕಂಬಳಿಹಾಳ ಗ್ರಾಮ ಮತ್ತು ಅಂಚೆ ಹುನುಗುಂದ ಗ್ರಾಮ , ಬಾಗಲಕೋಟೆ ಎಂಬವರ ದೂರಿನಂತೆ ಪಿರ್ಯಾದಿದಾರರು KSRTC ಬಸ್ಸಿನ ಚಾಲಕರಾಗಿದ್ದು  ದಿನಾಂಕ 29.09.2022 ರಂದು  KA 19 F 3026 ನೇ KSRTC ಬಸ್ಸನ್ನು  ಧರ್ಮಸ್ಥಳದಿಂದ  ಮಂಗಳೂರಿಗೆ ಚಲಾಯಿಸಿಕೊಂಡು ಬರುತ್ತಿದ್ದ ಸಮಯ ಸುಮಾರು 16:30 ಗಂಟೆಗೆ ಬಂಟ್ವಾಳ ತಾಲೂಕು, ಬಿ-ಕಸಬಾ ಗ್ರಾಮದ, ಜಕ್ರಿಬೆಟ್ಟು ಎಂಬಲ್ಲಿಗೆ ತಲುಪಿದಾಗ ಬಂಟ್ವಾಳ ಪೇಟೆ ಒಳ ರಸ್ತೆಯಿಂದ ಮುಖ್ಯ ರಸ್ತೆಗೆ KA 21 EC 2818 ನೇ ಸ್ಕೂಟರ್ ಸವಾರ ಅಹಮ್ಮದ್ ಸುಹೈಲ್ ಎಂಬವರು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿದಾರರು ಚಲಾಯಿಸುತ್ತಿದ್ದ KSRTC ಬಸ್ಸಿನ ಎದುರಿಗೆ ಒಮ್ಮೆಲೆ ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಅಪಘಾತದಲ್ಲಿ ಸ್ಕೂಟರ್ ಸವಾರನಿಗೆ ತಲೆಯ ಬಲಭಾಗಕ್ಕೆ, ಬಲಭಾಗ ಮೊಣ ಕೈ-ತೋಳಿಗೆ ಗುದ್ದಿದ ಗಾಯಗಳಾಗಿದ್ದು ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಅ.ಕ್ರ 113/2022 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಜಿ.ವಿಠಲ್ ಆಳ್ವ ಪ್ರಾಯ: ( 52) ವರ್ಷ  ತಂದೆ: ದಿ|| ಸೋಮಪ್ಪ ಆಳ್ವ.‌  ವಾಸ:ಕುಂಪನಮಜಲು ಮನೆ ಪುದು ಗ್ರಾಮ, ಫರಂಗಿಪೇಟೆ ಅಂಚೆ ಬಂಟ್ವಾಳ ಎಂಬವರ ದೂರಿನಂತೆ ಪಿರ್ಯಾದಿದಾರರು ದಿನಾಂಕ 30.09.2022 ರಂದು  ತನ್ನ ಬಾಬ್ತು KA 19 D 0334 ನೇ ಒಮ್ನಿ ಕಾರನ್ನು ಬಂಟ್ವಾಳ ತಾಲೂಕು, ಪುದು ಗ್ರಾಮದ,  ಫರಂಗಿಪೇಟೆ ಯಲ್ಲಿನ ಪೂಂಜಾ ಸಂಕೀರ್ಣದ ಮುಂಭಾಗ ರಸ್ತೆ ಬದಿಯ ಕಚ್ಚಾ ಮಣ್ಣು ರಸ್ತೆಯಲ್ಲಿ ಪಾರ್ಕ್ ಮಾಡಿರುವ ಸಮಯ ಸುಮಾರು ಬೆಳಿಗ್ಗೆ 09:45 ಗಂಟೆಗೆ ಬಿ.ಸಿ ರೋಡು ಕಡೆಯಿಂದ KA 19 ML 3155 ನೇ ಕಾರನ್ನು ಅದರ ಚಾಲಕ ಆಸೀಫ್ ಮೊಹಮ್ಮದ್ ರವರು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿ ಪಾರ್ಕ್ ಮಾಡಿದ್ದ ಫಿರ್ಯಾದಿದಾರರ ಕಾರಿಗೆ ಡಿಕ್ಕಿ ಹೊಡೆದು, ಫಿರ್ಯಾದಿದಾರರ ಕಾರಿನ  ಪಕ್ಕದಲ್ಲೆ ಪಾರ್ಕ್ ಮಾಡಿದ್ದ KA 19 ML 1372 ನೇ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ಫಿರ್ಯಾದಿದಾರರ ಕಾರು ಜಖಂಗೊಂಡಿದ್ದು, ಅವರ ಪಕ್ಕದಲ್ಲೆ ಪಾರ್ಕ್ ಮಾಡಿದ್ದ ಆಲ್ಟೋ ಕಾರು ಕೂಡ ಸಂಪೂರ್ಣ ಜಖಂ ಆಗಿರುತ್ತದೆ, .ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಅ.ಕ್ರ 114/2022 ಕಲಂ: 279, ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ನಾಗೇಶ್‌ ಎಂ. ಪ್ರಾಯ 25 ವರ್ಷ, ತಂದೆ: ಜನಾರ್ಧನ ನಾಯ್ಕ್ ವಾಸ: ಮುಂಡಾವು ಮೂಲೆ ಮನೆ,  ಒಳಮೊಗ್ರು ಗ್ರಾಮ, ಕೈಕಾರ ಅಂಚೆ, ಪುತ್ತೂರು ಎಂಬವರ ದೂರಿನಂತೆ ದಿನಾಂಕ 30-09-2022 ರಂದು 7:45 ಗಂಟೆಗೆ ಆರೋಪಿ ಮೋಟಾರ್‌ ಸೈಕಲ್‌ ಸವಾರ ವಿಜಯ ಎಂ ಎಂಬವರು  KA-21-EB-9665 ನೇ ನೋಂದಣಿ ನಂಬ್ರದ ಮೋಟಾರ್‌ ಸೈಕಲನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗಿ,  ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಜಂಕ್ಷನ್‌ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೆದ್ದಾರಿಯ ತೀರ ಬಲಬದಿಗೆ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರಾದ ನಾಗೇಶ್‌ ರವರು kA-21-X-3897 ನೇ  ನೋಂದಣಿ ನಂಬ್ರದ ಮೋಟಾರ್‌ ಸೈಕಲಿನಲ್ಲಿ ಸವಾರರಾಗಿ ಪುತ್ತೂರು ಕಡೆಯಿಂದ ಕೆದಿಲ ಕಡೆಗೆ ಚಲಾಯಿಸಿಕೊಂಡು ಹೋಗಿ, ಹೆದ್ದಾರಿಯ ಬಲಬದಿಯ ಕೆದಿಲ ರಸ್ತೆಗೆ ಇಂಡಿಕೇಟರ್‌ ಹಾಕಿ ಬಲ ಬದಿ ಹೆದ್ದಾರಿಯ ಅಂಚಿಗೆ ತಲುಪಿದಾಗ ಅಪಘಾತವಾಗಿ, ಪಿರ್ಯಾದುದಾರರು ಮೋಟಾರ್‌ ಸೈಕಲ್‌  ಸಮೇತ ರಸ್ತೆಗೆ ಬಿದ್ದು, ಅವರ ತಲೆಗೆ, ಎಡಕೈಗೆ, ಮೊಣಗಂಟಿಗೆ, ಬಲಕಾಲಿನ ಹಾಗೂ ಎಡಕಾಲಿನ ಕೋಲು ಕಾಲಿನ ಬಳಿ, ಸೊಂಟಕ್ಕೆ ಗುದ್ದಿದ ಹಾಗೂ ರಕ್ತಗಾಯವಾಗಿ,  ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.ಆರೋಪಿ ಮೋಟಾರ್‌ ಸೈಕಲ್‌ ಸವಾರನಿಗೂ ಗಾಯಗಳಾಗಿ ಚಿಕಿತ್ಸೆಯ ಬಗ್ಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟಿರುತ್ತಾರೆ.ಈ ಬಗ್ಗೆ ಪುತ್ತೂರು ಸಂಚಾರ ಠಾಣೆ 151/2022 ಕಲಂ: 279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 01-10-2022 11:17 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080