ಅಭಿಪ್ರಾಯ / ಸಲಹೆಗಳು

ಕಾಣೆ ಪ್ರಕರಣ: 1

ಬೆಳ್ತಂಗಡಿ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಫಾತಿಮ, ಗಂಡ: ಅಬ್ದುಲ್ ರಹೀಮ್, ವಾಸ: ಮದ್ದಡ್ಕ ಮನೆ, ಕುವೆಟ್ಟು ಗ್ರಾಮ, ಬೆಳ್ತಂಗಡಿ ಎಂಬವರ ದೂರಿನಂತೆ ಪಿರ್ಯಾದಿದಾರರ  ಗಂಡ  ಅಬ್ದುಲ್ ರಹೀಮ್ ಎಂಬವರು ಮದ್ದಡ್ಕದಲ್ಲಿ ಫಾಸ್ಟ್ ಪುಡ್ ವ್ಯಾಪಾರ ಮಾಡಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಆರ್ಥಿಕವಾಗಿ ತುಂಬಾ ನಷ್ಟದಲ್ಲಿದ್ದು,  ದಿನಾಂಕ:01-03-2021 ರಂದು 13-00 ಗಂಟೆಗೆ  ಪಿರ್ಯಾದಿದಾರರ ಗಂಡ ಅಬ್ದುಲ್ ರಹೀಮ್ ರವರು ಪಿರ್ಯಾದಿದಾರರಲ್ಲಿ ತಾನು ಬೆಳ್ತಂಗಡಿಗೆ ಹೋಗಿ ಬರುವು ದಾಗಿ ಹೇಳಿ ಫಾಸ್ಟ್ ಪುಡ್ ಅಂಗಡಿಯಿಂದ ಹೋದವರು  ಇದುವರೆಗೆ ವಾಪಾಸು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿರುತ್ತಾರೆ. ಈ ಬಗ್ಗೆ ಬೆಳ್ತಂಗಡಿ ಠಾಣಾ ಅ.ಕ್ರ 23/2021 ಕಲಂ: ಗಂಡಸು ಕಾಣೆಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಕೊಲೆ ಬೆದರಿಕೆ ಪ್ರಕರಣ: 1

ಉಪ್ಪಿನಂಗಡಿ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಮುಕುಂದ ಪ್ರಾಯ: 18 ವರ್ಷ ತಂದೆ: ಸೀತರಾಮ ನಾಯ್ಕ ವಾಸ: ಆದರ್ಶ ನಗರ 34 ನೆಕ್ಕಿಲಾಡಿ ಗ್ರಾಮ ಪುತ್ತೂರು ಎಂಬವರ ದೂರಿನಂತೆ ಪಿರ್ಯಾದಿರವರು ದಿನಾಂಕ: 02.03.2021 ರಂದು ರಾತ್ರಿ 10:15 ಗಂಟೆಗೆ  ಮನೆಯಲ್ಲಿರುವ ಸಮಯ ಮನೆಯ ಗೇಟಿನ ಎದುರು ಆಪೇ ಟೆಂಪೋ ವಾಹನದಲ್ಲಿ ಪರಿಚಯದ ಅಪಾದಿತರುಗಳಾದ ಉಬೈದ್ , ಫರ್ಸೀನ್, ರಶೀದ್, ಸೈಫ್, ರಹೀಂ ಮತ್ತು ಇತರರು ಸಮಾನ ಉದ್ದೇಶದಿಂದ ಅಕ್ರಮ ಕೂಟ ಸೇರಿಕೊಂಡು ಮನೆಯ ಗೇಟನ್ನು ತುಳಿದು ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಪಿರ್ಯಾದಿದಾರರನ್ನು ಉದ್ದೇಶಿಸಿ ಅವಾಚ್ಯ ಶಬ್ಥಗಳಿಂದ ಬೈದು ಜೀವ ಬೆದರಿಕೆ ಹಾಕಿ  ಕೈಯಿಂದ ಹಲ್ಲೆ ನಡೆಸಿರುತ್ತಾರೆ. ಅಲ್ಲದೇ ಅಪಾದಿತರುಗಳು ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರಿಗೆ ಕಲ್ಲಿನಿಂದ ಹಾನಿಗೊಳಿಸಿ ಬ್ರೇಕ್ ಲೈಟ್ ಹುಡಿ ಮಾಡಿ ಸುಮಾರು ರೂ 4,000/- ನಷ್ಟವನ್ನುಂಟು ಮಾಡಿರುತ್ತಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ 20/2021 ಕಲಂ: 143,147,447,504,506,323,427 ಜೊತಗೆ 149 ಭಾ.ದಂ.ಸಂ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಅಸ್ವಾಭಾವಿಕ ಮರಣ ಪ್ರಕರಣ: 1

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಯೋಗೇಶ್ ಪ್ರಾಯ 39 ವರ್ಷ ತಂದೆ ತನಿಯಪ್ಪ ಪೂಜಾರಿ ಮಿನಾಲ್ದೊಟ್ಟು ಮನೆ ಮಣಿನಾಲ್ಕೂರು ಗ್ರಾಮ ಬಂಟ್ವಾಳ ಎಂಬವರ ದೂರಿನಂತೆ ಪಿರ್ಯಾದುದಾರರ ತಮ್ಮ ಅಶೋಕ್ (35) ಎಂಬಾತನು ದಿನಾಂಕ: 07.02.2021 ರಂದು ಬೆಳಿಗ್ಗೆ 12.00 ಗಂಟೆಗೆ ತನ್ನ ಮನೆ ಸಮೀಪ ಮಣಿನಾಲ್ಕೂರು ಗ್ರಾಮದ ಮಿನಾಲ್ದೊಟ್ಟು ಎಂಬಲ್ಲಿ ಗುಡ್ಡ ಪ್ರದೇಶದಲ್ಲಿ ಮರದ ಗೆಲ್ಲುಗಳನ್ನು ಕಡಿಯುತ್ತಿದ್ದ ಸಮಯ ಆಕಸ್ಮಿಕವಾಗಿ ಕೈ ತಪ್ಪಿ ನೆಲಕ್ಕೆ ಬಿದ್ದು ಒಳ ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಮಂಗಳಾ ಆಸ್ಪತ್ರೆ ಹಾಗೂ ತದನಂತರ ಕೆಎಂಸಿ ಅತ್ತಾವರ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು, ದಿನಾಂಕ: 03.03.2021 ರಂದು ಮದ್ಯಾಹ್ನ 12.39 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣಾ ಯುಡಿಆರ್ ನಂ 09/2021 ಕಲಂ 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 04-03-2021 10:08 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080