ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

  • ವಿಟ್ಲ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ K.ವಸಂತ  ಪ್ರಾಯ( 38) ತಂದೆ:  ಐತ್ತಪ್ಪ  ಪೂಜಾರಿ ವಾಸ:  ಕುಕ್ಕುದಡ್ಕ ಮನೆ,ವಿಟ್ಲ ಕಸಬ ಗ್ರಾಮ. ಬಂಟ್ವಾಳ  ಎಂಬವರ ದೂರಿನಂತೆ ದಿನಾಂಕ:05.01.2023 ರಂದು  ಸಂಜೆ  17.30 ಗಂಟೆಗೆ  ವಿಟ್ಲ ರಿಕ್ಷಾ ಪಾರ್ಕ್‌ ನಲ್ಲಿರುವ ಸಮಯ  ತನ್ನ  ಪರಿಚಯದ  ಸೇರಾಜೆ ನಿವಾಸಿ ರೋರ್ಬಟ್‌ ಲೋಬೋ ಎಂಬವರು ಸೇರಾಜೆಗೆ ಹೋಗುವರೇ ಅವರ ಮಗಳು ರೊಲ್ವಿಟಾಳೊಂದಿಗೆ ಪಿರ್ಯಾಧಿದಾರರ ರಿಕ್ಷಾದಲ್ಲಿ ಕೆಎ-70-2758ನೇದರಲ್ಲಿ ವಿಟ್ಲದಿಂದ ಹೊರಟು ಸೇರಾಜೆ  ನೀರಕಣಿ ಮಾರ್ಗವಾಗಿ ಸಾಗುತ್ತಾ  ಬಂಟ್ವಾಳ ತಾಲೂಕು ಜೋಗಿ ಮಠ ಕ್ರಾಸ್‌ ಎಂಬಲ್ಲಿಗೆ ಸಮಯ ಸಂಜೆ 17.45 ಗಂಟೆಗೆ ತಲುಪಿದಾಗ ಜೋಗಿಮಠ ರಸ್ತೆಯಿಂದ ಕೆಎ-19-MB-638ನೇ ಕಾರೊಂದನ್ನು ಅದರ ಚಾಲಕಿ ಶ್ರೀಮತಿ ಗಾಯತ್ರಿ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾಧಿದಾರರ ಆಟೋ ರಿಕ್ಷಾಕ್ಕೆ ಡಿಕ್ಕಿವುಂಟು ಮಾಡಿದ ಪರಿಣಾಮ ರಿಕ್ಷಾ ಚರಂಡಿಗೆ ಬಿದ್ದಿದು ಪರಿಣಾಮ ಪಿರ್ಯಾಧಿಗೆ ತರಚಿದ ಗಾಯವಾಗಿದ್ದು, ರಿಕ್ಷಾ ಪ್ರಯಾಣಿಕರಾದ ರೊರ್ಬಟ್‌ ಲೋಬೋರವರ ಎಡ ಕಾಲಿಗೆ, ಸೊಂಟದ ಎಡ  ಬಾಗಕ್ಕೆ ಗುದ್ದಿದ ಗಾಯ ಮತ್ತು ರೋಲ್ವಿಟಾಳಿಗೆ ಸೊಂಟಕ್ಕೆ ಗುದ್ದಿದ ಗಾಯವಾಗಿರುತ್ತದೆ.  ಅಪಘಾತದಿಂದ ಪಿರ್ಯಾಧಿಯ ರಿಕ್ಷಾ ಜಖಂಗೊಂಡಿರುತ್ತದೆ. ಪಿರ್ಯಾಧಿ ಗಾಯಳುಗಳನ್ನು ಚಿಕಿತ್ಸೆ ಬಗ್ಗೆ ಒಂದು ವಾಹನದಲ್ಲಿ ವಿಟ್ಲ ಬೆನಕ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯಾಧಿಕಾರಿಯವರು ಪ್ರಥಮ ಚಿಕಿತ್ಸೆ ನೀಡಿ  ಹೆಚ್ಚಿನ ಚಿಕಿತ್ಸೆ ಬಗ್ಗೆ  ಮೇಲ್ದದರ್ಜೆ  ಆಸ್ಪತ್ರೆಗೆ  ಕರೆದುಕೊಂಡು ಹೋಗುವಂತೆ  ತಿಳಿಸಿದ  ಮೇರೆಗೆ ಗಾಯಾಳುಗಳನ್ನು ಪುತ್ತೂರು ಹಿತಾ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ  ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲಿಸಿ  ಚಿಕಿತ್ಸೆ ನೀಡಿರುತ್ತಾರೆ. ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 005/2023  ಕಲಂ: 279 ,337 ಬಾಧಂಸಂ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ವಿಶ್ವನಾಥ ಕಾಮತ್(65)‌ ತಂದೆ: ದಿ. ಗಣಪತಿ ಕಾಮತ್‌ ವಾಸ: ಕಾಮತ್ ಕಂಪೌಂಡ್‌, ಹಾರಾಡಿ, ಪುತ್ತೂರು ಕಸಬಾ ಗ್ರಾಮ, ಪುತ್ತೂರು ಎಂಬವರ ದೂರಿನಂತೆ ದಿನಾಂಕ 05-01-2023 ರಂದು 18:50 ಗಂಟೆಗೆ ಆರೋಪಿ ಮೋಟಾರ್ ಸೈಕಲ್ ಸವಾರ  ಎಂಬವರು KA-21-X-0632 ನೇ ನೋಂದಣಿ ನಂಬ್ರದ ಮೋಟಾರ್ ಸೈಕಲ್‌ನ್ನು ಉಪ್ಪಿನಂಗಡಿ - ಪುತ್ತೂರು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಚಲಾಯಿಸಿಕೊಂಡು ಹೋಗಿ  ಪುತ್ತೂರು ತಾಲೂಕು ಪುತ್ತೂರು ಕಸ್ಬಾ ಗ್ರಾಮದ ಹಾರಾಡಿ ರೈಲ್ವೆ ಬ್ರಿಡ್ಜ್ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಮೋಟಾರ್ ಸೈಕಲ್‌ ಸ್ಕೀಡ್‌ ಆಗಿ, ಸವಾರನ ಹತೋಟಿ ತಪ್ಪಿ, ರಸ್ತೆಯ ಎಡಬದಿಯ ಮಣ್ಣು ರಸ್ತೆಯಲ್ಲಿ ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಪಿರ್ಯಾದುದಾರರಿಗಿ ಮೋಟಾರ್‌ ಸೈಕಲ್‌ ಅಪಘಾತವಾಗಿ, ಪಿರ್ಯಾದುದಾರರು ರಸ್ತೆಗೆ ಬಿದ್ದು, ಬಲಕಾಲಿನ ತೊಡೆಗೆ ಗುದ್ದಿದ ಗಾಯವಾಗಿ  ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.  ಆರೋಪಿ ಮೋಟಾರ್ ಸೈಕಲ್‌ ಸವಾರನಿಗೆ ಸಣ್ಣ-ಪುಟ್ಟ ಗುದ್ದಿದ ಗಾಯವಾಗಿದ್ದು ಯಾವುದೇ ಚಿಕಿತ್ಸೆ ಪಡೆದಿರುವುದಿಲ್ಲ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ 03/2023 ಕಲಂ: 279, 337  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತರೆ ಪ್ರಕರಣ: 1

  • ಸುಬ್ರಹ್ಮಣ್ಯ ಪೊಲೀಸ್ ಠಾಣೆ : ದಿನಾಂಕ: 06-01-2023ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ  ಕಲಂ: 354(ಬಿ),506 ಐಪಿಸಿ, ಕಲಂ:12 ಪೋಕ್ಸೋ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 07-01-2023 10:42 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080