Feedback / Suggestions

ಅಪಘಾತ ಪ್ರಕರಣ: 3

  • ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಮಹಮ್ಮದ್ ಹನೀಫ್ ಪ್ರಾಯ : 41 ವರ್ಷ, ತಂದೆ: ದಿ|| ಅಬೂಬಕ್ಕರ್ ವಾಸ: ಖಂಡಿಗ ಮನೆ, ಬೋಳಂತೂರು ಗ್ರಾಮ, ಬಂಟ್ವಾಳ ಎಂಬವರ ದೂರಿನಂತೆ ಪಿರ್ಯಾದಿದಾರರು ದಿನಾಂಕ 06-05-2022 ರಂದು ಸಿರಾಜುದ್ದೀನ್ ರವರ ಬಾಬ್ತು KA-19-HJ-4629 ನೇ ಸ್ಕೂಟರಿನಲ್ಲಿ ಹಿಂಬದಿ ಸವಾರನಾಗಿ ಕುಳಿತುಕೊಂಡು ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸಮಯ ಸುಮಾರು ಬೆಳಿಗ್ಗೆ 05:30 ಗಂಟೆಗೆ ಬಂಟ್ವಾಳ ತಾಲೂಕು ಬಿ-ಕಸಬಾ ಗ್ರಾಮದ ಜಕ್ರಿಬೆಟ್ಟುವಿಗೆ ತಲುಪಿದಾಗ ಸ್ಕೂಟರನ್ನು ಸಿರಾಜುದ್ದೀನ್ ರವರು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಅಪಘಾತದಲ್ಲಿ ಪಿರ್ಯಾದಿದಾರರ ಎಡಕೋಲು ಕೈಗಳಿಗೆ ಗುದ್ದಿದ ಗಾಯ, ಬಲಕೈ ಮುಂಗೈಗೆ ಗುದ್ದಿದ ಹಾಗೂ ತರಚಿದ ಗಾಯಗೊಂಡವರು ಚಿಕಿತ್ಸೆಯ ಬಗ್ಗೆ ಮಂಗಳೂರು ಇಂಡಿಯಾನ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ 49/2022 ಕಲಂ 279,337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಸುಮಂತ್ ಪ್ರಾಯ : 18 ವರ್ಷ, ತಂದೆ: ಸುಕೇಶ್ ವಾಸ: ಜಕ್ರಿಬೆಟ್ಟು ಮನೆ, ಬಿ-ಕಸಬಾ ಗ್ರಾಮ, ಬಂಟ್ವಾಳ ಎಂಬವರ ದೂರಿನಂತೆ ಪಿರ್ಯಾದಿದಾರರು ದಿನಾಂಕ 06-05-2022 ರಂದು ಸೃಜನ್ ರವರ ಬಾಬ್ತು KA-19-ET-2296 ನೇ ಸ್ಕೂಟರಿನಲ್ಲಿ ಸಹ ಸವಾರನಾಗಿ ಕುಳಿತುಕೊಂಡು ಗಿರಿಗುಡ್ಡೆ ಕಡೆಯಿಂದ ಅಗ್ರಹಾರ ಕಡೆಗೆ ಹೋಗುತ್ತಾ ಸಮಯ ಸುಮಾರು ಮಧ್ಯಾಹ್ನ 12:30 ಗಂಟೆಗೆ ಬಂಟ್ವಾಳ ತಾಲೂಕು ಬಿ-ಕಸಬಾ ಗ್ರಾಮದ ಅಗ್ರಹಾರ ಎಂಬಲ್ಲಿಗೆ ತಲುಪಿದಾಗ ಸ್ಕೂಟರನ್ನು ಸೃಜನ್ ರವರು ತಿರುವು ರಸ್ತೆಯಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಅಪಘಾತದಲ್ಲಿ ಪಿರ್ಯಾದಿದಾರರ ಬಲಬದಿ ಕುತ್ತಿಗೆಗೆ ಗುದ್ದಿದ ಹಾಗೂ ತರಚಿದ ಗಾಯ ಹಾಗೂ ಬಲ ತೊಡೆಗೆ, ಬಲ ಕೋಲು ಕಾಲಿಗೆ, ಬಲ ಮುಂಗೈಗೆ ಗುದ್ದಿದ ಹಾಗೂ ತರಚಿದ ಗಾಯಗೊಂಡವರು ಚಿಕಿತ್ಸೆಯ ಬಗ್ಗೆ ಮಂಗಳೂರು ಕಂಕನಾಡಿ ಫಾದರ್ ಮುಲ್ಲರ್  ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ  ಅ.ಕ್ರ 50/2022 ಕಲಂ 279,337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಅಭಿಜಿತ್ ರಾಜೇಂದ್ರ ಪ್ರಭು, ಪ್ರಾಯ : 33 ವರ್ಷ, ತಂದೆ: ರಾಜೇಂದ್ರ ಗೋಪಾಲ ಕೃಷ್ಣ ಪ್ರಭು ವಾಸ: 404 ರೆಸೊಟಿಕ ಅಪಾರ್ಟ್ ಮೆಂಟ್ 5ನೇ ಕ್ರಾಸ್  ಬಿಜೈ ನ್ಯೂ ರೋಡ್ ಮಂಗಳೂರು ಎಂಬವರ ದೂರಿನಂತೆ ಪಿರ್ಯಾದಿದಾರರು ದಿನಾಂಕ:06.05.2022 ರಂದು ತನ್ನ ಬಾಬ್ತು KA-19-MA-0793 ನೇ ಕಾರಿನಲ್ಲಿ  ಮಂಗಳೂರಿನಿಂದ ಮಡಿಕೇರಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಾ ಸಮಯ ಸುಮಾರು 20.30 ಗಂಟೆಗೆ ಬಂಟ್ವಾಳ ತಾಲೂಕು ತುಂಬೆ ಗ್ರಾಮದ ತುಂಬೆ ಎಂಬಲ್ಲಿಗೆ ತಲುಪಿದಾಗ ರಸ್ತೆ ಬದಿಯಲ್ಲಿ  ನಿಂತುಕೊಂಡಿದ್ದ AP-26-TL-6665 ನೇ ಲಾರಿಯನ್ನು ಅದರ ಚಾಲಕ ವೆಂಕಟೇಶ್ವರಲು ರವರು  ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೆಲೆ ರಸ್ತೆಯ ಬಲಬದಿಗೆ ಚಲಾಯಿಸಿ ಪಿರ್ಯಾದಿದಾರರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ  ಕಾರಿನ ಎಡಬದಿಯ ಎರಡೂ ಡೋರುಗಳು ಹಾಗೂ ಎಡಬಾಡಿ ಜಖಂಗೊಂಡಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ 51/2022 ಕಲಂ 279, ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತರೆ ಪ್ರಕರಣ: 2

  • ಪುತ್ತೂರು ಗ್ರಾಮಾಂತರ  ಪೊಲೀಸ್ ಠಾಣೆ : ದಿ. 07.05.2022 ರಂದು ಪುತ್ತೂರು ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಅ ಕ್ರ  56/2022 ಕಲಂ 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂದಕ ಮತ್ತು ಸಂರಕ್ಷಣಾ ಅಧ್ಯಾದೇಶ 2020ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ವಿಟ್ಲ ಪೊಲೀಸ್ ಠಾಣೆ : ದಿನಾಂಕ :07-05-2022 ರಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 72/2022 ಕಲಂ: 341,354,506,307  ಬಾಧಂಸಂ ಯಂತೆ ಪ್ರಕರಣ ದಾಖಲಾಗಿರುತ್ತದೆ

 

 

ಅಸ್ವಾಭಾವಿಕ ಮರಣ ಪ್ರಕರಣ: 1

  • ಬಂಟ್ವಾಳ ನಗರ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಮಹಮ್ಮದ್ ಅನ್ಸಾರ್ ಪ್ರಾಯ 28 ವರ್ಷ ತಂದೆ: ಅಬ್ದುಲ್ ರಹಿಮಾನ ವಾಸ: ಗೂಡಿನ ಬಳಿ ಮನೆ ಬಿ ಮೂಡ ಗ್ರಾಮ ಬಂಟ್ವಾಳ ಎಂಬವರ ದೂರಿನಂತೆ ಪಿರ್ಯಾಧಿದಾರರು ಬಂಟ್ವಾಳ ಪುರಸಭೆ ಯ ಸದಸ್ಯರಾಗಿದ್ದು ದಿನಾಂಕ 07-05-2022 ರಂದು ಸಂಜೆ 05.00 ಗಂಟೆಗೆ     ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ  ಗೂಡಿನಬಳಿಯ ನೇತ್ರಾವತಿ ಹೊಸ ಸೇತುವೆ ಬಳಿ ತನ್ನ ಬಾಬ್ತು ಮೋಟಾರ ಸೈಕಲ್ ನಲ್ಲಿ ಹೋಗುತ್ತಿರುವಾಗ ಯಾರೋ ಒಬ್ಬ ವ್ಯಕ್ತಿ ನೇತ್ರಾವತಿ ಹೊಸ ಸೇತುವೆ ಮೇಲಿಂದ ನದಿಗೆ ಹಾರಿದನು, ಕೊಡಲೇ ಪಿರ್ಯಾಧಿದಾರರು  ಮೋಟಾರ ಸೈಕಲ್ ನಿಲ್ಲಿಸಿ, ಅಲ್ಲೆ ಕೆಲಸ ಮಾಡುತ್ತಿದ್ದ ಸಾರ್ವಜನಿಕರಲ್ಲಿ  ಸಹಾಯದಿಂದ  ನೀರಿಗೆ ಬಿದ್ದ ವ್ಯಕ್ತಿಯನ್ನುಮೇಲಕ್ಕೆ ಎತ್ತಿ ದಡದಲ್ಲಿ ಮಲಗಿಸಿ ನೋಡದಲ್ಲಿ ವ್ಯಕ್ತಿಯು ಮೃತಪಟ್ಟಿರುವುದು ಕಂಡು ಬಂದಿರುತ್ತದೆ. ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ಯುಡಿಆರ್ 18-2022 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Last Updated: 09-05-2022 10:19 AM Updated By: Dakshina Kannada District Police


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : DAKSHINA KANNADA DISTRICT POLICE
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080