ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: ೦1

ಪುತ್ತೂರು ಸಂಚಾರ ಪೊಲೀಸ್ ಠಾಣೆ:  ಪಿರ್ಯಾದಿದಾರರಾದ ವಸಂತ ಕುಮಾರ್‌ ಆರ್‌ ಸಿ (31 ವರ್ಷ), ತಂದೆ: ಚೋಮಣ್ಣ ನಾಯ್ಕ್‌, ವಾಸ: ರಂಗತ್‌ಮಲೆ ಮನೆ, ಅಲೆಟ್ಟಿ ಅಂಚೆ ಮತ್ತು ಗ್ರಾಮ, ಸುಳ್ಯ ತಾಲೂಕು ಎಂಬವರ ದೂರಿನಂತೆ ದಿನಾಂಕ 09-03-2022 ರಂದು 16-30 ಗಂಟೆಗೆ ಆರೋಪಿ ಕಾರು ಚಾಲಕ ಪ್ರದೀಪ್‌ ಕುಮಾರ್‌ ಎಂಬವರು KA-21-P-4401 ನೇ ನೋಂದಣಿ ನಂಬ್ರದ ಕಾರನ್ನು ನೇತಾಜಿ ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಹಾರಾಡಿ ಎಂಬಲ್ಲಿ ಒಳ ರಸ್ತೆಯಿಂದ ಪುತ್ತೂರು-ಉಪ್ಪಿನಂಗಡಿ ಸಾರ್ವಜನಿಕ ಮುಖ್ಯ ರಸ್ತೆಗೆ, ಮುಖ್ಯ ರಸ್ತೆಯಲ್ಲಿ ಹೋಗುವ ವಾಹನಗಳನ್ನು ಗಮನಿಸದೇ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಮುಖ್ಯ ರಸ್ತೆಯಲ್ಲಿ ದೇವಿಪ್ರಸಾದ್‌ ಎಂಬವರು ಹಾರಾಡಿ ಕಡೆಯಿಂದ ಕೆಮ್ಮಾಯಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ KA-21-Q-8259 ನೇ ನೋಂದಣಿ ನಂಬ್ರದ ಮೋಟಾರ್‌ ಸೈಕಲಿಗೆ ಕಾರು ಅಪಘಾತವಾಗಿ ಸವಾರ ದೇವಿಪ್ರಸಾದ್‌ ರವರು ರಸ್ತೆಗೆ ಬಿದ್ದು, ತಲೆಗೆ ತೀವ್ರವಾದ ಗಾಯಗಳಾಗಿರುತ್ತದೆ. ಗಾಯಾಳುವನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಕೆ.ಎಸ್‌ .ಹೆಗ್ಡೆ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ ಅ.ಕ್ರ:  45/2022 ಕಲಂ: 279,338ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಅಸ್ವಾಭಾವಿಕ ಮರಣ ಪ್ರಕರಣ: ೦1

ಬಂಟ್ವಾಳ ನಗರ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಲಲಿತಾ  ಪ್ರಾಯ 43 ವರ್ಷ ಗಂಡ: ದಿನೇಶ ಪೂಜಾರಿ ವಾಸ: ಮಣಿ ಮನೆ  ಬಂಟ್ವಾಳ ಕಸಬಾ ಗ್ರಾಮ ಬಂಟ್ವಾಳ ಎಂಬವರ ದೂರಿನಂತೆ ತನ್ನ ತಮ್ಮನಾದ ಕೇಶವ ಪ್ರಾಯ 38 ವರ್ಷ ತಂದೆ: ಸುಂದರ ಪೂಜಾರಿ ವಾಸ: ನಾಟಿ ಮನೆ ನರಿಕೊಂಬು ಗ್ರಾಮ ಬಂಟ್ವಾಳ ಈತನು ಕೂಲಿ ಕೆಲಸ ಮಾಡಿಕೊಂಡಿದ್ದು, ದಿನಾಂಕ 10-03-2022 ರಂದು ಬೆಳಿಗ್ಗೆ ಪಿರ್ಯಾಧಿದಾರರು ಬಂಟ್ವಾಳ ದೇವಸ್ಥಾನಕ್ಕೆ ಹೊರಟಿದ್ದು ಸಮಯ 9.00 ಗಂಟೆಗೆ ರಸ್ತೆಯ ಬದಿಯಲ್ಲಿ ಪಿರ್ಯಾಧಿದಾರರ ತಮ್ಮ ಕಾಣಸಿಕ್ಕಿದ್ದು ಪಿರ್ಯಾಧಿದಾರು ಆತನಲ್ಲಿ ಮಾತನಾಡಿ ಹೋಗಿರುತ್ತಾರೆ. ನಂತರ ಪಿರ್ಯಾಧಿದಾರರ ಬಂಟ್ವಾಳ ದೇವಸ್ಥಾನದಲ್ಲಿ ಇರುವ ಸಮಯ ಪಿರ್ಯಾಧಿದಾರರ ಮಗಳು ಪಿರ್ಯಾಧಿದಾರರಿಗೆ ಕರೆ ಮಾಡಿ ಮನೆಯ ಹಿಂದೆ ಇರುವ ಸ್ಟೋರ್ ರೂಂನಲ್ಲಿ ಕೇಶವನು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ನೇತಾಡಿಕೊಂಡಿರುವುದಾಗಿ ತಿಳಿಸಿದಂತೆ, ಪಿರ್ಯಾಧಿದಾರರು ಹಾಗೂ  ಪಿರ್ಯಾಧಿದಾರರು ಗಂಡ ಬಂದು ನೋಡಲಾಗಿ ಸ್ಟೋರ್ ರೂಂನಲ್ಲಿರುವ ಮರದ ಪಕ್ಕಾಸಿಗೆ ಗೋಣಿ ಚಿಲದ ನೈಲಾನ ಹಗ್ಗವನ್ನು ಬಿಗಿದು ಇನ್ನೊಂದು ತುದಿಯನ್ನು ಕುತ್ತಿಗೆಗೆ ನೇಣು ಬಿಗಿದು ನೇತಾಡಿಕೊಂಡಿದ್ದು ನೋಡಲಾಗಿ ಮೃತಪಟ್ಟಿರುತ್ತಾನೆ.  ದಿನಾಂಕ 10-03-2022 ರಂದು ಬೆಳಿಗ್ಗೆ 9.00  ಗಂಟೆಯಿಂದ ದಿನಾಂಕ: 10-03-2022 ರಂದು ಬೆಳಿಗ್ಗೆ 11.30 ಗಂಟೆಯ ಮಧ್ಯಾವಧಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ಯುಡಿಆರ್ 13-2022 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 11-03-2022 10:51 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080