ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: ೦1

ಪುತ್ತೂರು ಸಂಚಾರ ಪೊಲೀಸ್ ಠಾಣೆ:  ಪಿರ್ಯಾದಿದಾರರಾದ ಬಿ. ನಾರಾಯಣ ಗೌಡ  (58 ವರ್ಷ), ತಂದೆ: ದಿವಂಗತ ಬಾಬು ಗೌಡ,  ವಾಸ: ಶ್ರೀ ಲಕ್ಷೀ ನಿಲಯ, ದರ್ಬೆ, ದರ್ಬೆ ಅಂಚೆ, ಪುತ್ತೂರು ಕಸಬಾ ಗ್ರಾಮ, ಪುತ್ತೂರು ತಾಲೂಕು ಎಂಬವರ ದೂರಿನಂತೆ ದಿನಾಂಕ 14-03-2022 ರಂದು 17-00 ಗಂಟೆಗೆ  ಆರೋಪಿ ಸ್ಕೂಟರ್‌ ಸವಾರ ದೇವಿಪ್ರಸಾದ್‌ ಎಂಬವರು KA-19-HG-8566ನೇ ನೋಂದಣಿ ನಂಬ್ರದ ಸ್ಕೂಟರಿನಲ್ಲಿ ಸಹಸವಾರರೊಬ್ಬರನ್ನು ಕುಳ್ಳಿರಿಸಿಕೊಂಡು ಉಪ್ಪಿನಂಗಡಿ-ಪುತ್ತೂರು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಚಲಾಯಿಸಿಕೊಂಡು ಹೋಗಿ ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ಸೇಡಿಯಾಪು ಕ್ರಾಸ್‌ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಮಣ್ಣು ರಸ್ತೆಗೆ ಚಲಾಯಿಸಿದ ಪರಿಣಾಮ, ಸದ್ರಿ ಸ್ಥಳದಲ್ಲಿ ನಿಂತುಕೊಂಡು ಇಲಾಖಾ ಕರ್ತವ್ಯ ನಿರ್ವಹಿಸುತ್ತಿದ್ದ ಪುತ್ತೂರು ಸಂಚಾರ ಠಾಣೆಯ ಇಂಟರ್‌ಸೆಪ್ಟರ್‌ ವಾಹನ  ಚಾಲಕ ಬಿ. ನಾರಾಯಣ ಗೌಡ, ಎ.ಆರ್‌.ಎಸ್‌.ಐ ರವರಿಗೆ ಸ್ಕೂಟರ್‌ ಅಪಘಾತವಾಗಿ, ಬಲ ಕಣ್ಣಿನ ಬಳಿ ಹಾಗೂ ಬಲ ಕೈಗೆ ತರಚಿದ ರಕ್ತಗಾಯ  ಮತ್ತು ಸೊಂಟಕ್ಕೆ ಬಲ ಕಾಲಿಗೆ ಗುದ್ದಿದ ನೋವು ಆಗಿರುತ್ತದೆ. ಆರೋಪಿ ಸ್ಕೂಟರ್‌ ಸವಾರನಿಗೆ ಬಲ ಕಾಲಿನ ಮೊಣ ಗಂಟು, ಬಲ ಕಾಲಿನ ಹೆಬ್ಬೆರಳಿಗೆ, ಬಲ ಕಣ್ಣಿನ ಹುಬ್ಬುವಿನ ಬಳಿ, ಬಲ ಕೈಯ ಅಂಗೈಯ ಮೇಲ್ಬಾಗ ಹಾಗೂ ಅಂಗೈಗೆ ತರಚಿದ ರಕ್ತಗಾಯವಾಗಿ, ಇಬ್ಬರನ್ನೂ ಕರೆದುಕೊಂಡು ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಹೋಗಿದ್ದು ವೈದ್ಯರು ಚಿಕಿತ್ಸೆ ನೀಡಿರುತ್ತಾರೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  49/2022 ಕಲಂ: 279,337ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಕಳವು ಪ್ರಕರಣ: ೦1

ವಿಟ್ಲ ಪೊಲೀಸ್ ಠಾಣೆ:  ಪಿರ್ಯಾದಿದಾರರಾದ ಹೈದರ ಆಲಿ ಪ್ರಾಯ 35 ವರ್ಷ ತಂದೆ:ಇಬ್ರಾಹಿಂ ವಾಸ:ಕಡಂಬು ಮನೆ, ವಿಟ್ಲ ಪಡ್ನೂರು ಗ್ರಾಮ ಬಂಟ್ವಾಳ ತಾಲೂಕು ದ.ಕ ಎಂಬವರ ದೂರಿನಂತೆ ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ಕಡಂಬು ಎಂಬಲ್ಲಿರುವ ತನ್ನ ಮನೆಯಿಂದ ದಿನಾಂಕ:13-03-2022 ರಂದು ರಾತ್ರಿ 9.30 ಗಂಟೆಗೆ ಸಂಸಾರ ಸಮೇತ ಕಡಂಬು ಮಸೀದಿಯಲ್ಲಿ ನಡೆಯುವ ಧಾರ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಮನೆಗೆ ಬೀಗ ಹಾಕಿ ಹೋಗಿದ್ದು,ಪ್ರವಚನ ಮುಗಿದ ಪಿರ್ಯಾಧಿದಾರರ ಅಕ್ಕ ಹಾಗೂ ಅವರ ಮಗಳು ಮಿಶ್ರೀಯಾ ರಾತ್ರಿ 12.20 ಗಂಟೆಗೆ ವಾಪಾಸು ಮನೆಗೆ ಬಂದು ಬಾಗಿಲು ತೆರೆದು ಒಳಗೆ ಹೋದಾಗ ಮನೆಯ ಹಾಲ್‌ನಲ್ಲಿ ಮನೆಯ ಮುಚ್ಚಿಗೆ ತೆರೆದಿದ್ದು ಗಾಬರಿಗೊಂಡು ಮನೆಯ ಬೆಡ್‌ ರೂಂಗೆ ಹೋಗಿ ನೋಡಿದಾಗ ಬೆಡ್‌ರೂಂನಲ್ಲಿರುವ ಎರಡು ಗಾದ್ರೇಜ್‌ಗಳ ಬಾಗಿಲು ತೆರೆದಿದ್ದು ಗಾದ್ರೇಜ್‌ಗಳನ್ನು ಪರಿಶೀಲಿಸಿದಾಗ ಅದರ ಒಳಗೆ ಇಟ್ಟಿದ್ದ 2.5 ಗ್ರಾಂ ಚಿನ್ನದ ಉಂಗುರ-1 ಹಾಗೂ 4 ಗ್ರಾಂ ನ ಕಿವಿಯ ಓಲೆ-01ನ್ನು ಯಾರೋ ಕಳ್ಳರೂ ಕಳವು ಮಾಡಿಕೊಂಡು ಹೋಗಿರುತ್ತಾರೆ ಕಳುವಾದ ಬೆರಳುಂಗುರ ಹಾಗೂ ಕಿವಿ ಓಲೆಯ ಅಂದಾಜು ಮೌಲ್ಯ 30.000/- ರೂ ಆಗಬಹುದಾಗಿದೆ.  ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 43/2022 ಕಲಂ: 457,380 ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಅಸ್ವಾಭಾವಿಕ ಮರಣ ಪ್ರಕರಣ: ೦1

ಧರ್ಮಸ್ಥಳ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಶ್ರೀಮತಿ ಅರುಣ ಪ್ರಾಯ:37 ವರ್ಷ ಗಂಡ: ವಸಂತ ಗೌಡ ವಾಸ; ಪಾಲ್ತಿಮಾರ್‌ ಮನೆ ರೆಖ್ಯಾ ಗ್ರಾಮ ಬೆಳ್ತಂಗಡಿ ತಾಲೂಕು ಎಂಬವರ ದೂರಿನಂತೆ ಅವರ ಗಂಡ ವಸಂತ ಗೌಡ  ಎಂಬವರು ದಿನಾಂಕ;10-03-2022 ರಂದು ಬೆಳಿಗ್ಗೆ 11.00 ಗಂಟೆ ಸಮಯಕ್ಕೆ ಪಿರ್ಯಾದುದಾರರ ಬಾಬ್ತು ಅಡಿಕೆ ತೋಟದಲ್ಲಿ ಅಡಿಕೆ ಮರವನ್ನು ಹತ್ತಿ ಅಡಿಕೆ ಕಿಳುವ ಸಮಯ ಆಕಸ್ಮಿಕವಾಗಿ ಅಡಿಕೆ ಮರದಿಂದ ನೆಲಕ್ಕೆ ಬಿದ್ದಿದ್ದು ಆ ಸಮಯ ಪಿರ್ಯಾದುದಾರರ ಮನೆಯ ಪಕ್ಕದ ಧನಂಜಯ ಎಂಬವರು ಚಿಕಿತ್ಸೆಯ ಬಗ್ಗೆ ಉಜಿರೆಯ ಬೆನಕ ಆಸ್ಪತ್ರೆಗೆ ಕರೆದಕೊಂಡು ಹೋಗಿದ್ದು ಅಲ್ಲಿಯ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ  ಕೆ ಎಸ್‌ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ಕರೆದುಕೊಂಡು ಹೋದಲ್ಲಿ   ಅಲ್ಲಿನ ವೈದ್ಯರು  ಪರೀಕ್ಷಿಸಿ ಒಳರೋಗಿಯಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿರುತ್ತಾರೆ. ದಿನಾಂಕ;14-03-2022 ರಂದು ಸಮಯ ಸುಮಾರು 9.15 ಗಂಟೆಗೆ  ಚಿಕಿತ್ಸೆ ಪಲಕಾರಿಯಾಗದೇ ಮೃತಪಟ್ಟಿರುತ್ತಾರೆ ಎಂದು ಅಲ್ಲಿನ ವೈದ್ಯರು ತಿಳಿಸಿರುತ್ತಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್‌ 16/2022 ಕಲಂ: 174 ಸಿಆರ್‌ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 15-03-2022 10:55 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080