ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: ೦1

 

ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಮೆಲ್ವಿನ್ ರೋಡ್ರಿಗಸ್, ಪ್ರಾಯ: 46 ವರ್ಷ ತಂದೆ: ಪೌಲ್ ರೋಡ್ರಿಗಸ್, ವಾಸ: ಅಗ್ರಹಾರ್ ಚರ್ಚ್ ಮನೆ ಬಂಟ್ವಾಳ ಕಸಬಾ ಗ್ರಾಮ, ಬಂಟ್ವಾಳ ತಾಲೂಕು ರವರು ದಿನಾಂಕ: 07.09.2022 ರಂದು  ಅವರ ಬಾಬ್ತು KA-70-2212 ನೇ ಆಟೋರಿಕ್ಷಾದಲ್ಲಿ ಬಾಡಿಗೆ ನಿಮಿತ್ತ ಪರಿಚಯವರಾದ ಪ್ರಾಂಕಿ ಮೊಂತೆರೋ ಎಂಬವರನ್ನು ಬಂಟ್ವಾಳ ಪೇಟೆಯಿಂದ  ಅಗ್ರಹಾರ ಕಡೆಗೆ ಕರೆದುಕೊಂಡು ಹೋಗುತ್ತಾ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಜಕ್ರಿಬೆಟ್ಟು ಜಂಕ್ಷನ್ ಎಂಬಲ್ಲಿಗೆ ತಲುಪುತ್ತಿದ್ದಂತೆ ಬಿ.ಸಿ.ರೋಡ್ ಕಡೆಯಿಂದ KA-19-EE-9276 ನೇ ಮೋಟಾರ್ ಸೈಕಲನ್ನು ಅದರ ಸವಾರ ಅಕ್ಷಯ್ ಮಡಿವಾಳ ಎಂಬವರು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಜಂಕ್ಷನ್ ನಲ್ಲಿ ಝೀಬ್ರಾ ಕ್ರಾಸ್ ಇದ್ದರೂ ನಿಧಾನಿಸದೇ ಒಮ್ಮೆಲೆ ಆಟೋರಿಕ್ಷಾ ಎಡಬದಿಯ ಬೋಡಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ಆಟೋರಿಕ್ಷಾ ಬಲ ಮಗ್ಗುಲಾಗಿ ಬಿದ್ದು ಮೋಟಾರ್ ಸೈಕಲ್ ಸವಾರ ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದರು ಪರಿಣಾಮ ಪಿರ್ಯಾದಿದಾರರಿಗೆ ಬಲ ಮೊಣಕೈಗೆ ಗುದ್ದಿದ ಹಾಗೂ ಎಡ ಹಾಗೂ ಬಲ ಕಾಲು ಮಣಿ ಗಂಟಿಗೆ ತರಚಿದ ಹಾಗೂ ಗುದ್ದಿದ ಗಾಯ, ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ  ಫ್ರಾಂಕಿ ಮೊಂತೆರೋ ಎಂಬವರಿಗೆ  ಮುಖಕ್ಕೆ ತರಚಿದ ಗಾಯ, ಎಡ ತೊಡೆಗೆ ಗುದ್ದಿದ ಹಾಗೂ ತರಚಿದ ಗಾಯಗೊಂಡವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದು, ಅಪಘಾತ ಪಡಿಸಿದ ಮೋಟಾರ್ ಸೈಕಲ್ ಸವಾರ ಚಿಕಿತ್ಸೆಯ ಬಗ್ಗೆ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಅ.ಕ್ರ 102/2022 ಕಲಂ: 279, 337 ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಪುಂಜಾಲಕಟ್ಟೆ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ರಕ್ಷಿತ್ ಕೆ ಪ್ರಾಯ 28 ವರ್ಷ ತಂದೆ: ಮೋಹನ್ ಮೂಲ್ಯ ವಾಸ: ಕಲಕುಂಜ ಮನೆ, ದಂಡೆಗೋಲಿ ಅಂಚೆ  ,ಬುಡೋಲಿ ಗ್ರಾಮ ಬಂಟ್ವಾಳ ತಾಲೂಕು ರವರು ದಿನಾಂಕ: 07.09.2022 ರಂದು ಮೋಟಾರು ಸೈಕಲ್ ನಂಬ್ರ KA70J0491 ನೇದನ್ನು ವಾಶ್ ಮಾಡಿಸುವರೇ  ಸಂಬಂಧಿ ಪ್ರೀತಮ್  ಎಂಬಾತನನ್ನು ಮೋಟಾರು ಸೈಕಲಿನಲ್ಲಿ ಸಹ ಸವಾರನಾಗಿ ಕುಳ್ಳೀರಿಸಿಕೊಂಡು ಮನೆಯಿಂದ ಹೊರಟು ಕುದ್ಕೋಳಿ- ನೇರಳಕಟ್ಟೆ  ಮಾರ್ಗವಾಗಿ ವಾಮದಪದವಿಗೆ ಕಡೆಗೆ ಬರುತ್ತಾ ಬೆಳಿಗ್ಗೆ ಸುಮಾರು 11.00 ಗಂಟೆಗೆ ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಗ್ರಾಮದ ಕರಿಮಲೆ ಕ್ರಾಸ್ ಎಂಬಲ್ಲಿಗೆ ತಲುಪುತ್ತಿದ್ದಂತೆ ನೇರಳಕಟ್ಟೆ ಕಡೆಯಿಂದ ಕುದ್ಕೋಳಿ ಕಡೆಗೆ MH 46 BQ 0056 ನೇ  ಕಾರನ್ನು ಅದರ ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರ ಬಲ ಬದಿಗೆ ಚಲಾಯಿಸಿ ಪಿರ್ಯಾದಿದಾರರು  ಸವಾರಿ ಮಾಡುತ್ತಿದ್ದ ಮೋಟಾರು ಸೈಕಲಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಪಿರ್ಯಾದಿದಾರರು ಮಣ್ಣು ರಸ್ತೆಗೆ ಹಾಗೂ  ಸವಾರ ಪ್ರೀತಮ್ ಮೋಟಾರು ಸೈಕಲ್ ಸಮೇತಾ ಡಾಮಾರು ರಸ್ತೆಗೆ ಎಸೆಯಲ್ಪಟ್ಟು ಪ್ರೀತಮ್ ಎಂಬಾತನಿಗೆ ಎಡಕೆನ್ನೆಗೆ ತುಟಿಗೆ ಕೈಗೆ ರಕ್ತಗಾಯವಾಗಿದ್ದು, ಪಿರ್ಯಾದಿದಾರರಿಗೆ ತರಚಿದ ಗಾಯವಾದವರನ್ನು ಅಲ್ಲಿಸೇರಿದ್ದ ಜನರು ಆರೈಕೆ ಮಾಡಿ ಖಾಸಾಗಿ ವಾಹನದಲ್ಲಿ ಚಿಕಿತ್ಸೆಯ ಬಗ್ಗೆ ಕಳುಹಿಸಿಕೊಟ್ಟಿದ್ದು, ಚಿಕಿತ್ಸೆಯ ಬಗ್ಗೆ ವಾಮದಪದವು ಸರಕಾರಿ ಆಸ್ಪತ್ರೆಗೆ ಹೋಗಿ ಬಳಿಕ ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರು ಎಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳ ರೋಗಿಯನ್ನಾಗಿ ದಾಖಲಿಸಿದ್ದು ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 65/2022 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 09-09-2022 11:19 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080